Karnataka Voice

Latest Kannada News

ನಟ ದರ್ಶನಗೆ ಮಧ್ಯಂತರ ಜಾಮೀನು… ಸೆಲೆಬ್ರೇಟಿಸ್‌ಗೆ ದೀಪಾವಳಿ ಧಮಾಕಾ…!!!

Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿ ದರ್ಶನ್​ಗೆ ಬಿಗ್​ ರಿಲೀಫ್ ಸಿಕ್ಕಿದೆ. ದರ್ಶನ್​​​ಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.

ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು.

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಎರಡು ಕಡೆಯ ವಾದ-ಪ್ರತಿವಾದವನ್ನು ಆಲಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ಉ. ಇದೀಗ ದರ್ಶನ್​​​ಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.


Spread the love

Leave a Reply

Your email address will not be published. Required fields are marked *