“ಒಂಟಿಯಾಗಿದ್ದವರ ಮೇಲೆ ಅಟ್ಯಾಕ್” ಮೂವರನ್ನ ಹೆಡಮುರಿಗೆ ಕಟ್ಟಿದ ಹುಬ್ಬಳ್ಳಿ ಬೆಂಡಿಗೇರಿ ಠಾಣೆ ಪೊಲೀಸರು…!!!
1 min readಹುಬ್ಬಳ್ಳಿ: ಒಂಟಿಯಾಗಿ ಓಡಾಡುತ್ತಿದ್ದ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಹಣ, ಮೊಬೈಲ್ ಗಳನ್ನು ದೋಚುತ್ತಿದ್ದ ಖತರ್ನಾಕ್ ದರೊಡೆಕೋರರನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅವರ ಬಳಿ ಇದ್ದ ಹಣ ಹಾಗೂ ಮೊಬೈಲ್ ದರೋಡೆ ಮಾಡಲಾಗಿತ್ತು, ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲು ಮಾಡಿಕೊಂಡ ಹುಬ್ಬಳ್ಳಿಯ ಬೆಂಡಿಗೇರಿಯ ಠಾಣೆಯ ಇನ್ಸ್ಪೆಕ್ಟರ್ ಬಿ.ಟಿ. ಬುದ್ನಿ ನೇತೃತ್ವದ ತಂಡ ಪೀಲ್ಡ್ ಗೆ ಇಳಿದು ಕಾರ್ಯಾಚರಣೆ ಆರಂಭ ಮಾಡಿತ್ತು, ನಗರದ ಪ್ರಮುಖ ಸ್ಥಳಗಳಲ್ಲಿನ ಸಿಸಿ ಕ್ಯಾಮರಾದ ದ್ರಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡಿದಾಗ ಆರೋಪಿಗಳ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು.
ಕೂಡಲೇ ಬೆಂಡಿಗೇರಿ ಠಾಣೆಯ ಪೊಲೀಸರು ಅಲರ್ಟ್ ಆಗಿ ದರೋಡೆ ಮಾಡಿ ಬೇರೆ ಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಮೂರು ಜನ ಆರೋಪಿಗಳನ್ನು ಪಿಎಸ್ಐ ಶರಣ ದೇಸಾಯಿ ಹಾಗೂ ಸಿಬ್ಬಂದಿಗಳಾದ ವೆಂಕಟೇಶ, ರಾಮು, ಹನುಮಂತ, ಬಸವರಾಜ, ನೀಲಗಾರ, ದೇವು, ಪ್ರಕಾಶ, ಸಂಜೀವ, ಮಂಜು, ಮಾರುತಿ ಆರೋಪಿಗಳನ್ನು ಬಂಧನ ಮಾಡಿದ್ದು, ಮೂರು ಜನ ಆರೋಪಿಗಳು ಹುಬ್ಬಳ್ಳಿಯ ಸೆಟ್ಲಿಮೆಂಟ್’ನ ನಿವಾಸಿಗಳಾದ ರಮೇಶ, ಸಾಯಿನಾಥ್ ಹಾಗೂ ವೆಂಕಟೇಶ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಎರಡು ಬೈಕ್,ದರೋಡೆ ಮಾಡಿದ್ದ ಒಂದು ಮೊಬೈಲ್ ಹಾಗೂ ನಗದನ್ನು ವಶಕ್ಕೆ ಪಡೆದು ಆರೋಪಿಗಳ ಮೇಲೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ.