Posts Slider

Karnataka Voice

Latest Kannada News

ಶಿವಳ್ಳಿ ಬಳಿ ಅಪಘಾತ: ಮೂವರ ಸಾವು, ಮತ್ತಿಬ್ಬರ ಸ್ಥಿತಿ ಚಿಂತಾಜನಕ, ಹುಬ್ಬಳ್ಳಿ ಕಿಮ್ಸಗೆ ರವಾನೆ…

1 min read
Spread the love

ಧಾರವಾಡ: ಕಾರನ್ನ ಓವರ್‌ಟೇಕ್ ಮಾಡಲು ಹೋದ ಬೈಕ್ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಘಟನೆಯಲ್ಲಿ ಸಾವಿಗೀಡಾದವರನ್ನ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಬಸವರಾಜ ಕುರಟ್ಟಿ, ಯಲ್ಲಪ್ಪ ಘಂಟಿ ಹಾಗೂ ಧಾರವಾಡ ಗೊಲ್ಲರ ಕಾಲನಿ ನಿವಾಸಿ ಎಂದು ಗುರುತಿಸಲಾಗಿದೆ.

ಕ್ರೂಸರ್ ವಾಹನದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರನ್ನ ಧಾರವಾಡದಿಂದ ಮರಳಿ ಹನಸಿಯತ್ತ ಹೊರಟಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನ ಕಿಮ್ಸಗೆ ರವಾನೆ ಮಾಡಲಾಗಿದೆ.

ಧಾರವಾಡ ಸಿವಿಲ್ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಭೇಟಿ ನೀಡಿ, ಮಾಹಿತಿ ಪಡೆದರು. ಪ್ರಕರಣ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *

You may have missed