Posts Slider

Karnataka Voice

Latest Kannada News

ಅರವಿಂದ ಲಿಂಬಾವಳಿ, ಸಿ.ಎಂ.ಉದಾಸಿಗೆ ಕೊಕ್….!

Spread the love

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗಿದೆ. ಬಿಜೆಪಿ ಕೋರ್ ಕಮಿಟಿಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಿ. ಶ್ರೀರಾಮುಲು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಸೇರ್ಪಡೆಯಾಗಿದ್ದಾರೆ.

ಕೋರ್ ಕಮಿಟಿಯ ಸದಸ್ಯರಾಗಿದ್ದ ಸಿ.ಟಿ. ರವಿ ವಿಶೇಷ ಆಹ್ವಾನಿತರಾಗಿದ್ದಾರೆ. 13 ಸದಸ್ಯರು, ಮೂವರು ವಿಶೇಷ ಆಹ್ವಾನಿತರ ಕಮಿಟಿಯನ್ನು ಪುನರ್ ರಚನೆ ಮಾಡಲಾಗಿದೆ. ಸಚಿವ ಅರವಿಂದ ಲಿಂಬಾವಳಿ ಮತ್ತು ಸಿ.ಎಂ. ಉದಾಸಿ ಅವರಿಗೆ ಕೊಕ್ ನೀಡಲಾಗಿದೆ.

ಕೋರ್ ಕಮಿಟಿಯಲ್ಲಿ ನಳಿನ್ ಕುಮಾರ್ ಕಟೀಲು, ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಸಿ.ಎನ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಆರ್. ಅಶೋಕ್, ಬಿ. ಶ್ರೀರಾಮುಲು, ನಿರ್ಮಲ್ ಕುಮಾರ್ ಸುರಾನಾ, ಬಿ.ಪಿ. ಅರುಣ್ ಕುಮಾರ್ ಅವರಿದ್ದಾರೆ. ವಿಶೇಷ ಆಹ್ವಾನಿತರಾಗಿ ಅರುಣ್ ಸಿಂಗ್, ಡಿ.ಕೆ. ಅರುಣಾ ಮತ್ತು ಸಿ.ಟಿ. ರವಿ ಅವರನ್ನು ನೇಮಕ ಮಾಡಲಾಗಿದೆ.


Spread the love

Leave a Reply

Your email address will not be published. Required fields are marked *