Posts Slider

Karnataka Voice

Latest Kannada News

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ: ರೇಸ್‌ನಲ್ಲಿ ಶಂಕರ ಕೋಮಾರದೇಸಾಯಿ, ಶಿವು ಬೆಳಾರದ…!

1 min read
Spread the love

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ಗ್ರಾಮಾಂತರ ವಿಭಾಗದ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಆರಂಭಗೊಂಡಿದ್ದು, ಧಾರವಾಡ-71 ಕ್ಷೇತ್ರದ ಹಲವರು ರೇಸ್‌ನಲ್ಲಿದ್ದಾರೆ.

ಈಗಾಗಲೇ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡಿರುವ ಶಂಕರ ಕೋಮಾರದೇಸಾಯಿ ಹಾಗೂ ಓಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷರಾಗಿದ್ದ ಶಿವು ಬೆಳಾರದ ಅವರು ಪ್ರಮುಖ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಹಾಗೇ ಪಕ್ಷದ ಸಂಘಟನೆ ತೀವ್ರವಾಗಿ ಮುನ್ನೆಲೆಗೆ ಬಂದಿದ್ದು, ಇದಕ್ಕಾಗಿ ಹಲವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಈ ಬಾರಿ ಧಾರವಾಡ ಗ್ರಾಮೀಣ ಭಾಗಕ್ಕೆ ಅಧ್ಯಕ್ಷ ಸ್ಥಾನ ದೊರೆಯುವುದು ನಿಶ್ಚಿತವಾಗಿದ್ದು, ಪಕ್ಷದ ಯಾರಿಗೆ ಸ್ಥಾನ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ.


Spread the love

Leave a Reply

Your email address will not be published. Required fields are marked *