Posts Slider

Karnataka Voice

Latest Kannada News

ಜೋಡೆತ್ತುಗಳ ಸಮ್ಮುಖದಲ್ಲಿ “ರಕ್ತದಾನ” ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

1 min read
Spread the love

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ನಗರದ ರಾಷ್ಟ್ರೋತ್ಥಾನ ರಕ್ತನಿಧಿಯಲ್ಲಿ ರಕ್ತದಾನ ಮಾಡಿದರು.

ಬಿಜೆಪಿಯಲ್ಲಿ ಜೋಡೆತ್ತುಗಳು ಎಂದೇ ಖ್ಯಾತಿ ಪಡೆದಿರುವ ಪಾಲಿಕೆ ಸದಸ್ಯ ಸಂತೋಷ ಚವ್ಹಾಣ ಹಾಗೂ ಮಹೇಂದ್ರ ಕೌತಾಳರೊಂದಿಗೆ ಹಾಸ್ಯ ಚಟಾಕಿ ಹಾರಿಸುತ್ತಲೇ ಸಚಿವರು ರಕ್ತದಾನ ಮಾಡಿದ್ರು.

ಪ್ರಧಾನಿ ನರೇಂದ್ರ ಮೋದಿ ಅಂದ್ರೆ ಸುಧಾರಣೆ, ಸುಸ್ಥಿರ ಆಡಳಿತ: ಪ್ರಹ್ಲಾದ್ ಜೋಶಿ ಬಣ್ಣನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂದ್ರೆ ಸುಧಾರಣೆ, ಸುಸ್ಥಿರ ಹಾಗೂ ಸಮರ್ಥ ಆಡಳಿತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಣ್ಣಿಸಿದರು.

ನರೇಂದ್ರ ಮೋದಿಯವರ ಜನ್ಮ ದಿನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತ ನಿಧಿಯಲ್ಲಿ ರಕ್ತದಾನ ಮಾಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನೆಲೆ ಹಲವು ಸೇವಾ ಕಾರ್ಯಗಳನ್ನ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಹಲವು ಕಡೆ ಸ್ವಯಂ ಪ್ರೇರಿತವಾಗಿ ರಕ್ತದಾನ ಸೇರಿ ವಿವಿದ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಕರು ಸಾಕಷ್ಠು ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡ್ತಾಯಿದ್ದಾರೆ.
ದಾಖಲೆಯ ಮಟ್ಟದಲ್ಲಿ ರಕ್ತದಾನ ನಡೆಯಲಿದೆ ಎಂದರು.

ಕೇಂದ್ರ ಸಚಿವರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು.


Spread the love

Leave a Reply

Your email address will not be published. Required fields are marked *