Posts Slider

Karnataka Voice

Latest Kannada News

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಗೆ “ಗುಳೇ ಹೊರಟ” ಬಿಜೆಪಿ ಪ್ರಮುಖರು…

Spread the love

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರತಿನಿಧಿಸುವ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಇಂದಿನಿಂದ ಆರಂಭಗೊಳ್ಳಲಿದೆ.

ಬಿಜೆಪಿಯ ಹುಬ್ಬಳ್ಳಿ ಧಾರವಾಡ ಯುವ ಮೋರ್ಚಾ ಅಧ್ಯಕ್ಷ ಗೋಪಾಲ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ಹೂವಪ್ಪ ದಾಯಗೋಡಿ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ.

ಇದು ಆರಂಭವಾಗಿದ್ದು ಕೆಲವೇ ದಿನಗಳಲ್ಲಿ ಬಿಜೆಪಿಯ ಇನ್ನಷ್ಟು ಪ್ರಮುಖರು ಕಾಂಗ್ರೆಸ್ ಗೆ ಸೇರಲಿದ್ದಾರೆ. ಈ ಮೂಲಕ ಮಾಜಿ ಸಿಎಂ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನೆಡೆಯಾಗಲಿದೆ.


Spread the love

Leave a Reply

Your email address will not be published. Required fields are marked *