Karnataka Voice

Latest Kannada News

ಚಿತ್ರದುರ್ಗದ ಬಳಿ ಆಕಸ್ಮಿಕ ಬೆಂಕಿಗೆ ವಿಜಯಪುರದ ಐವರ ಸಜೀವ ದಹನ

Spread the love

ಚಿತ್ರದುರ್ಗ: ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಆಕಸ್ಮಿಕವಾಗಿ ಬೆಂಕಿ ತಗುಲಿ ಐವರು ಸಜೀವ ದಹನಗೊಂಡ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಆದಿವಾಲ ಬಳಿ ನಡೆದಿದೆ.

ವಿಜಯಪುರದ ಶೀಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3) ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಎಸ್ಪಿ ಅನುಪಮ ಅಗರವಾಲ್ ಮಾಹಿತಿ ನೀಡಿದ್ದು, ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಾಳುಗಳನ್ನ ಹಿರಿಯೂರು, ಚಿತ್ರದುರ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸ ಪಡಬೇಕಾಯಿತು. ಬೆಂಕಿ ಯಾವ ಕಾರಣಕ್ಕೆ ತಗುಲಿತು ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಕೊರೋನಾ ಸಮಯದಲ್ಲಿ ನಡೆದ ಮೊದಲ ಭೀಕರ ಘಟನೆಯಿದಾಗಿದೆ. ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ.


Spread the love

Leave a Reply

Your email address will not be published. Required fields are marked *