Posts Slider

Karnataka Voice

Latest Kannada News

ವನಹಳ್ಳಿ ಬಳಿ ಪ್ರಾಣ ಉಳಿಸಿಕೊಳ್ಳಲು ಪರದಾಟ…!

Spread the love

ಧಾರವಾಡ: ತಾಲೂಕಿನ ವನಹಳ್ಳಿ ಗ್ರಾಮದ ಬಳಿಯಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಪಲ್ಟಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಪ್ರಾಣ ಉಳಿಸಿಕೊಳ್ಳಲು ಪರದಾಡಿದರು.

ಧಾರವಾಡದಿಂದ ಹೆಬ್ಬಳ್ಳಿ, ವನಹಳ್ಳಿ ಮೂಲಕ ಮೊರಬಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *