CBSE ಫಲಿತಾಂಶ- ಧಾರವಾಡ ಜಿಲ್ಲೆಯಲ್ಲೆ ಅತ್ಯುತ್ತಮ ಸಾಧನೆ ಮಾಡಿದ “ರಾಯಪುರ KLE”- 100% ಫಲಿತಾಂಶ…

ಧಾರವಾಡ: ಎಸ್ಎಸ್ಎಲ್ಸಿ ಸಿಬಿಎಸ್ಇ ಫಲಿತಾಂಶ ಹೊರ ಬಂದಿದ್ದು, ಧಾರವಾಡ ಜಿಲ್ಲೆಯಲ್ಲಿ ರಾಯಪುರದ ಬಳಿಯಿರುವ ಕೆಎಲ್ಇ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ.
ಶಾಲೆಯ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದು, ಅದರಲ್ಲಿ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡಾ ತೊಂಬತ್ತಕ್ಕೂ ಹೆಚ್ಚು ಅಂಕಗಳನ್ನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ, ಸಂಯೋಜಕಿ ಡಾ.ಪ್ರೀತಿ ದೊಡ್ಡವಾಡ, ಪ್ರಾಂಶುಪಾಲರಾದ ಶುಭಾಂಗಿ ಮೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು ಮೆಚ್ಚಿದ್ದು, ವಿದ್ಯಾರ್ಥಿಗಳಿಗೂ ಹಾಗೂ ಪಾಲಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.