ಛಬ್ಬಿ ಗಣೇಶನ ದರ್ಶನಕ್ಕೆ ಹೋಗುವಂಗಿಲ್ಲ: ಯಾಕೆ ಗೊತ್ತಾ..?
1 min readಹುಬ್ಬಳ್ಳಿ: ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದವರಿಂದ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿಗಳ ಸಾರ್ವಜನಿಕ ದರ್ಶನಕ್ಕೆ ನಿಷೇಧ ಹೇರಲಾಗಿದೆ.
ಕುಲಕರ್ಣಿ ಮನೆತನದವರು ಸಾಂಪ್ರದಾಯಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪೂಜೆ ಪುರಸ್ಕಾರ ನಡೆಸಲು ಅವಕಾಶ ನೀಡಲಾಗಿದೆ. ಆರೋಗ್ಯದ ಹಿತದೃಷ್ಟಿಯಿಂದ ಸ್ಥಳೀಯ, ಹೊರ ಜಿಲ್ಲೆ ಹಾಗೂ ರಾಜ್ಯದ ಭಕ್ತಾಧಿಗಳು ದರ್ಶನಕ್ಕೆ ಆಗಮಿಸದಂತೆ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ವಿನಂತಿಸಿದ್ದಾರೆ.
ಸರಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಟ್ಟ ನಂತರ ಛಬ್ಬಿ ಗಣೇಶನ ದರ್ಶನಕ್ಕೆ ಅವಕಾಶ ಸಿಗಬಹುದೆಂದುಕೊಂಡಿದ್ದ ಭಕ್ತರಿಗೆ ನಿರಾಸೆಯಾಗಿದೆ.