Posts Slider

Karnataka Voice

Latest Kannada News

ಸಾರ್ವಜನಿಕ ಗಣೇಶೋತ್ಸವ ಸೆ. 5ರಂದು ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ..

1 min read
Spread the love

ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು‌ ಸೆಪ್ಟಂಬರ್ 5ರಂದು ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ಕ್ಷೇತ್ರ ಶಿಗ್ಗಾಂವದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಮಾತನಾಡಿದರು.

ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ‌ ನೀಡಲು ಕೇಳಿದ್ದೇವೆ. ಹೀಗಾಗಿ ಅದನ್ನ ನೋಡಿಕೊಂಡು ತೀರ್ಮಾನವನ್ನ ತೆಗೆದುಕೊಳ್ಳಲಾಗುವುದೆಂದು ಹೇಳಿದರು.

ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾಯಿಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌. ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌. ಎನ್‌ಐಎ ಜೊತೆ ನಮ್ಮ ಪೊಲೀಸರು ಕೂಡಿಕೊಂಡು ಕೆಲಸ ಮಾಡುತ್ತಿದ್ದಾರೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿ ಆಗಮಿಸುತ್ತಿದ್ದಾರೆ. ಬಳಿಕ ದಾವಣಗೆರೆ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದರು.

ಈಗಾಗಲೇ ನಾವು ವೀಕೆಂಡ್ ಕರ್ಪ್ಯೂ ತೆಗೆದಿದ್ದೇವೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ನೈಟ್ ಕರ್ಪ್ಯೂ ತೆಗೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಆರ್ಥಿಕ ಚಟುವಟಿಕೆ ಮೇಲೆ ನಿರ್ಬಂಧ ಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಕೋವಿಡ್ ನಿರ್ವಹಣೆಯೂ, ನಮಗೆ ಅಷ್ಟೇ ಮುಖ್ಯ. ಕೋವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ  ಸಡಿಲಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.


Spread the love

Leave a Reply

Your email address will not be published. Required fields are marked *