Posts Slider

Karnataka Voice

Latest Kannada News

ಸಿಎಂ ಬೊಮ್ಮಾಯಿಯವರು ಬರುತ್ತಿದ್ದ ವಿಮಾನಕ್ಕೆ ಮತ್ತೆ ತಾಂತ್ರಿಕ ದೋಷ…!

1 min read
Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯಲ್ಲಿ ನಡೆಯುವ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ವೇಳೆಯಲ್ಲಿ  ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.

file photo

ಬೆಳಿಗ್ಗೆ 8.45ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನಕ್ಕೆ ಟೇಕ್ ಆಫ್ ಕ್ಲಿಯರನ್ಸ್ ಸಿಗದ ಹಿನ್ನಲೆಯಲ್ಲಿ ಇನ್ನೂ ಸಿಎಂ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದಾರೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಹೀಗಾಗಿದೆ ಎಂದು ಗೊತ್ತಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಗೆ ಬೆಳಿಗ್ಗೆ 9.45ಕ್ಕೆ ಆಗಮಿಸಬೇಕಾಗಿತ್ತು. ವಿಮಾನದಿಂದ ಕೆಲಕಾಲ ತಡವಾಗಿ ಆಗಮಿಸುವ ಸಾಧ್ಯತೆಯಿದೆ.

ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಅತಿಯಾದ ಮಂಜುವಿದ್ದ ಪರಿಣಾಮ, ಸುಮಾರು ಹೊತ್ತು ಲ್ಯಾಂಡಿಂಗ್ ಸಮಸ್ಯೆಯಾಗಿದ್ದನ್ನ ಇಲ್ಲಿ ಸ್ಮರಿಸಬಹುದಾಗಿದೆ.


Spread the love

Leave a Reply

Your email address will not be published. Required fields are marked *