ಸಿಎಂ ಬಸವರಾಜ ಬೊಮ್ಮಾಯಿಯವರ ಆತ್ಮೀಯನ ಸಾವು: ನಾಳೆ ಹುಬ್ಬಳ್ಳಿಗೆ ಸಿಎಂ…!

ಹುಬ್ಬಳ್ಳಿ: ಸ್ಥಳೀಯ ಶಕ್ತಿನಗರದ ನಿವಾಸಿಯಾಗಿರುವ ರಾಜು ಪಾಟೀಲ ಅವರು ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರಕ್ಕೆ ನಾಳೆ ಆಗಮಿಸುತ್ತಿದ್ದಾರೆ.

ರಾಜು ಪಾಟೀಲ ವರಸೆಯಲ್ಲಿ ಬೊಮ್ಮಾಯಿಯವರ ಸಂಬಂಧಿಯೂ ಆಗಿದ್ದು, ಮೂಲತಃ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದವರು. ದಶಕಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ರಾಜು ಪಾಟೀಲರ ನಿಧನದ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ ಸಿಎಂ ನಗರಕ್ಕೆ ಆಗಮಿಸಲಿದ್ದು, ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಮತ್ತೆ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ.
ರಾಜು ಪಾಟೀಲ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ
ಬೆಂಗಳೂರು: ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು. ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ಮ ಜತೆ ಇರುತ್ತಿದ್ದರು. ಅವರ ಅಗಲಿಕೆ ನನಗೆ ಅತೀವ ದುಃಖ ತರಿಸಿದೆ. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರತ್ತೇನೆ ಎಂದು ಹೇಳಿದ್ದಾರೆ.