ಕಾಂಗ್ರೆಸ್ ನಾಯಕ ಇಸ್ಮಾಯಿಲ್ “ಹತ್ಯೆ ಸಂಚು” ಪ್ರಕರಣ- ತೀವ್ರ ಬೇಸರ ವ್ಯಕ್ತಪಡಿಸಿದ ಬಿಜೆಪಿಯ ಶಾಸಕ ಅರವಿಂದ ಬೆಲ್ಲದ್…!!!
1 min readಧಾರವಾಡ: ಕಾಂಗ್ರೆಸ್ ನಾಯಕರೂ ಆಗಿರುವ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಅವರ ಹತ್ಯೆಗೆ ಸಂಚು ರೂಪಿಸಿರುವ ಪ್ರಕರಣದ ಕುರಿತು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಧಾರವಾಡದಲ್ಲಿಂದು ಮಾತನಾಡಿದ ಬೆಲ್ಲದ್ ಅವರು, ಈ ವಿಷಯವನ್ನ ಗಂಭೀರವಾಗಿ ಪೊಲೀಸರು ತೆಗೆದುಕೊಳ್ಳಬೇಕು ಎಂದರು.
ವೀಡಿಯೋ….
ಗಾಂಜಾ ಸೇವನೆ ಮಾಡಿ ಕೃತ್ಯ ನಡೆಸಲು ಮುಂದಾಗಿರುವ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.