Posts Slider

Karnataka Voice

Latest Kannada News

ಧಾರವಾಡ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಮುಖಂಡರು ಶೀಘ್ರ ಬಿಜೆಪಿಗೆ: ರಾಜಕೀಯದಲ್ಲಿ ಮನ್ವಂತರ….

1 min read
Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೊಸ ಮನ್ವಂತರಗಳು ನಡೆಯುತ್ತಿರುವ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲೂ ಹೊಸ ಬದಲಾವಣೆಗಳು ನಡೆಯುತ್ತಿದ್ದು, ಜಿಲ್ಲೆಯ ಇಬ್ಬರು ಪ್ರಮುಖರು ಭಾರತೀಯ ಜನತಾ ಪಕ್ಷವನ್ನ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗಿದೆ.

ಭಾರತೀಯ ಜನತಾ ಪಕ್ಷದ ಪ್ರಮುಖರೊಂದಿಗೆ ಈಗಾಗಲೇ ಎರಡ್ಮೂರು ಸುತ್ತಿನ ಮಾತುಕತೆ ನಡೆದಿದ್ದು, ಸೇರ್ಪಡೆಯ ದಿನಾಂಕವನ್ನ ನಿಗದಿ ಮಾಡುವುದಷ್ಟೇ ಬಾಕಿ ಉಳಿದಿದೆ ಎಂದು ಗೊತ್ತಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಇಬ್ಬರು ನಾಯಕರು ಮುಂದಿನ ದಿನಗಳಲ್ಲಿ ಶಾಸಕರಾಗುವ ಬಯಕೆಯನ್ನ ಹೊಂದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಅವರು ಬಯಸಿದ ರೀತಿಯಲ್ಲಿ ನೋಡಿಕೊಳ್ಳುತ್ತಿಲ್ಲವೆಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖವಾದ ಸ್ಥಾನಗಳನ್ನೂ ನಿಭಾಯಿಸಿರುವ ಇಬ್ಬರು ನಾಯಕರು ಒಂದೇ ಸಮಾಜಕ್ಕೆ ಸೇರಿದವರಾಗಿದ್ದಾರೆಂದು ಹೇಳಲಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಹೊಸದೊಂದು ರಾಜಕೀಯ ಮನ್ವಂತರ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.


Spread the love

Leave a Reply

Your email address will not be published. Required fields are marked *