Posts Slider

Karnataka Voice

Latest Kannada News

ಆತ್ಮಸ್ಥೈರ್ಯದಿಂದಲೇ ಕೊರೋನಾ ಗೆದ್ದ “ಶಿವಳ್ಳಿಮಠ” ಕುಟುಂಬ…!

Spread the love

ಹುಬ್ಬಳ್ಳಿ: ಕೊರೋನ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಜನ ಕೊರೋನಾ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.

ಎಡದಿಂದ ಬಲಕ್ಕೆ ರಾಜು(34), ಶ್ರೇಯಾ (10ತಿಂಗಳು), ಲಕ್ಷ್ಮಿ(25), ವೈಭವಿ(1), ಶಶಿಕಲಾ(24), ಸಮರ್ಥ (2),  ಸಹನಾ(16), ವೈಷ್ಣವಿ(2), ಗಿರಿಜಮ್ಮ(60), ಶರಣಯ್ಯಾ(9), ಮಲ್ಲಯ್ಯ (63), ಮಹಾಂತಯ್ಯ(60), ಸಿದ್ದರಾಮಯ್ಯ(59), ಮಲ್ಲಿಕಾರ್ಜುನ (25), ಮಲ್ಲಿಕಾರ್ಜುನಯ್ಯಾ(28), ಮೃತ್ಯುಂಜಯ(27)

ಗ್ರಾಮದ ಶಿವಳ್ಳಿ ಮಠ ಕುಟುಂಬದವರು ಇದೇ ತಿಂಗಳು 3ನೇ ತಾರೀಖಿನಂದು 16 ಜನ ಕೊರೋನಾ ಪಾಸಿಟಿವ್ ಆಗಿದ್ದರು, ಹೋಮ್ ಐಸೋಲೇಷನ್ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ, ಇದರಲ್ಲಿ ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಇದರಲ್ಲಿ 45 ವರ್ಷ ಮೇಲ್ಪಟ್ಟ 4 ಜನರು ಈ ಮೊದಲೇ ಎರಡನೆ ಡೊಸ್ಸ್ ವ್ಯಾಕ್ಸಿನೇಷನ್ ಮಾಡಿಸಿಕೊಂಡಿದ್ದರು. ಇತರ  3ಜನರಿಗೆ ನೆಗೆಟಿವ್ ರಿಪೋರ್ಟ್ ಬಂದಿದ್ದೆ.

ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು  ಕಾಣಿಸಿಕೊಂಡಾಗ  ಕೊರೋನಾ ಟೆಸ್ಟ್ ಮಾಡಿಸಿಕೊಂಡು  ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು. ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ  ಭಯ ಪಡದೆ ಆತ್ಮಸ್ಥೈರ್ಯದಿಂದ ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೇ ಸೂಚನೆಗಳನ್ನು  ತಪ್ಪದೆ ಪಾಲಿಸಿದೆವು, ಎಂದು ಮನೆಯ ಮುಖ್ಯಸ್ಥ ಮಲ್ಲಯ್ಯ ಶಿವಳ್ಳಿಮಠ ಹೇಳಿದರು.


Spread the love

Leave a Reply

Your email address will not be published. Required fields are marked *