ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ “ಮಂಜುನಾಥ ಡೊಂಬರ” ನೂತನ ಕಮೀಷನರ್….!!!

ಬೆಂಗಳೂರು: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಮೀಷನರ್ ವರ್ಗಾವಣೆಯಾದ ಮರುದಿನವೇ ಹೊಸ ಕಮೀಷನರ್ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಮಂಜುನಾಥ ಡೊಂಬರ ಅವರನ್ನ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಾ.ಸಂತೋಷಕುಮಾರ ಬಿರಾದಾರ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ದೇವರಾಜ್ ಆರ್ ಎಂಬ ಅಧಿಕಾರಿಯನ್ನ ನೀಡಲಾಗಿದೆ.
ಮಹಾನಗರ ಪಾಲಿಕೆಯ ಈ ಆಯುಕ್ತರು ಎಷ್ಟು ದಿನ ಇರುತ್ತಾರೋ ಕಾದು ನೋಡಬೇಕಿದೆ.