Posts Slider

Karnataka Voice

Latest Kannada News

“ಮೈನು” ನದಾಫ್ ತಾಯಿ ದಿಲ್‌ಶಾದಬೇಗಂ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ… ಇಸ್ಮಾಯಿಲ್ ಪರ ನಿಂತ ಮುಖಂಡರು…!!!

1 min read
Spread the love

ಹುಬ್ಬಳ್ಳಿ: ಅಂಜುಮನ್ ಸಂಸ್ಥೆಯ ಧಾರವಾಡ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಅವರಿಗೆ ವಿಧಾನಪರಿಷತ್ ಸದಸ್ಯತ್ವಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರೋಸಿ ಹೋದ ಪಾಲಿಕೆ ಸದಸ್ಯಯೋರ್ವರು ರಾಜೀನಾಮೆ ಸಲ್ಲಿಸಿದ್ದಾರೆ.

ಧಾರವಾಡದ ಮುಖಂಡರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಗಿರುವ ಅನ್ಯಾಯದ ಬಗ್ಗೆ ಆಕ್ರೋಶವ್ಯಕ್ತಪಡಿಸಿದರು.

ರಾಜೀನಾಮೆ ಪತ್ರ…

ಸಾರಾಂಶ…

ಗೇ,
ಶ್ರೀ ಅಲ್ತಾಫಹುಸೇನ ಹಳ್ಳೂರ
ಅಧ್ಯಕ್ಷರು
ಹು.ಧಾ‌.ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ

ವಿಷಯ: ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತು

ಮಾನ್ಯರೇ,
ಕಾಂಗ್ರೆಸ್ ಪಕ್ಷದ ಯುವ ಉತ್ಸಾಹಿ ಮುಖಂಡರು, ಸಂಘಟನಾ ಚತುರ, ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶ್ರೀ ಇಸ್ಮಾಯಿಲ್ ತಮಟಗಾರ ಅವರಿಗೆ ಈ ಬಾರಿ ವಿಧಾನ ಪರಿಷತ್
ಟಿಕೆಟ್ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು ಮಾಡಿರುವ ಅನ್ಯಾಯವನ್ನು ಖಂಡಿಸಿ, ಧಾರವಾಡ ಜಿಲ್ಲೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ ತೆಗೆದುಕೊಂಡಿರುವ ತೀರ್ಮಾನಕ್ಕೆ ಮನನೊಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ ನಂ 06 ರ ಸದಸ್ಯತ್ವ ಸ್ಥಾನಕ್ಕೆ ನಾನು ರಾಜೀನಾಮೆಯನ್ನು ನೀಡುತ್ತಿದ್ದು ಮಾನ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಈ ಪತ್ರವನ್ನು ಪರಿಗಣಿಸಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ.

ಧನ್ಯವಾದಗಳೊಂದಿಗೆ,

ತಮ್ಮ ವಿಶ್ವಾಸಿ

ದಿಲಶಾದ್ ಬೇಗಂ ನದಾಫ
ಸದಸ್ಯರು
ಹು.ಧಾ.ಮಹಾನಗರ ಪಾಲಿಕೆ

File

ಯಾಸೀನ ಹಾವೇರಿಪೇಟೆ, ಮೈನುದ್ಧೀನ ನದಾಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *

You may have missed