Karnataka Voice

Latest Kannada News

ನವಲಗುಂದ-ಅಣ್ಣಿಗೇರಿಯಲ್ಲಿ 160ಬೆಡ್ ಕೋವಿಡ್ ಕೇರ್ ಸೆಂಟರ್- ಶಾಸಕ ಶಂಕರ ಪಾಟೀಲಮುನೇನಕೊಪ್ಪ

ನವಲಗುಂದ: ಪಟ್ಟಣವೂ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಶಾಸಕ ಶಂಕರ ಪಾಟೀಲಮುನೇನಕೊಪ್ಪ ನವಲಗುಂದ ಪಟ್ಟಣ ಮತ್ತು ಅಣ್ಣಿಗೇರಿ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸುತ್ತಿದ್ದಾರೆ.  

ನವಲಗುಂದ ನಗರದಲ್ಲಿನ ಮೊರಾರ್ಜಿ ದೇಸಾಯಿ ವಸತಿ ನಿಲಯವನ್ನು (100ಬೆಡ್) ಹಾಗೂ ಅಣ್ಣಿಗೇರಿ ನಗರದ ದೇವರಾಜ್ ಅರಸ್ ಹೆಣ್ಣು ಮಕ್ಕಳ ವಸತಿ ನಿಲಯವನ್ನು (60 ಬೆಡ್)ಗಳನ್ನು ಹೊಂದಿರುವ ಕೋವಿಡ್ ಕೇರ್ ಸೆಂಟರ್ ಗಳಾಗಿ ಬದಲಿಸುವ ಕುರಿತು ಪೂರ್ವತಯಾರಿ ಸಭೆಯನ್ನು ಶಾಸಕ ಶಂಕರ ಪಾಟೀಲಮುನೇನಕೊಪ್ಪ ಇಂದು ನಡೆಸಿದರು.

ಕ್ಷೇತ್ರದಲ್ಲಿನ ಜನರಿಗೆ ನಿರಂತರವಾಗಿ ಸಹಾಯ ಮಾಡುತ್ತಿರುವ ಶಾಸಕ ಶಂಕರ ಪಾಟೀಲಮುನೇನಕೊಪ್ಪ, ಒಂದು ಹೆಜ್ಜೆ ಮುಂದೆ ಹೋಗಿ ತಮ್ಮದೇ ಕ್ಷೇತ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡುತ್ತಿರುವುದು ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಸಭೆಯಲ್ಲಿ ತಹಶೀಲ್ದಾರ ನವೀನ ಹುಲ್ಲೂರ, ತಾಲೂಕು ಪಂಚಾಯತಿ ಅಧಿಕಾರಿ ಕಾಂಬ್ಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *