ಹುಬ್ಬಳ್ಳಿಯಲ್ಲಿ ಉಲ್ಲಾಸ ದೊಡ್ಡಮನಿ ಮನೆಯವರನ್ನ ಕಟ್ಟಿ ಹಾಕಿ- ದರೋಡೆ..
1 min readಗಣೇಶ ಪ್ರತಿಷ್ಟಾಪನೆ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್: ಮನೆಯಲ್ಲಿದ್ದವರ ಕೈಕಾಲು ಕಟ್ಟಿ ದರೋಡೆ
ಹುಬ್ಬಳ್ಳಿ: ಗಣೇಶ ಚತುರ್ಥಿಯನ್ನೆ ಬಂಡವಾಳ ಮಾಡಿಕೊಂಢ ದರೋಡೆಕೋರರ ಗ್ಯಾಂಗ್ ಹುಬ್ಬಳ್ಳಿಯಲ್ಲಿ ತಮ್ಮ ಕೈ ಚಳ ತೋರಿಸಿದ್ದಾರೆ.
ಮನೆಯಲ್ಲಿದ್ದವರನ್ನ ಕಟ್ಟಿಹಾಕಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ತಡರಾತ್ರಿ ನಡೆದಿದೆ.
ವಿದ್ಯಾ ಮಂದಿರ ಬುಕ್ ಡಿಪೋ ಮಾಲೀಕ ಉಲ್ಲಾಸ ದೊಡ್ಡಮನಿ ಎಂಬುವವರ ಕಿಟಕಿಯ ಕಬ್ಬಿಣದ ಗ್ರೀಲ್ ಕಟ್ ಮಾಡಿ ಮನೆ ಹೊಕ್ಕ 6 ಜನರ ದರೋಡೆಕೋರರು, ಮನೆಯಲ್ಲಿದ್ದವರ ಕೈ ಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಸುಮಾರು ಎಂಟು ಜನ ಡಕಾಯಿತರಿಂದ ಕೃತ್ಯ ನಡೆದಿದೆ. ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಟಾಪನೆ ಮಾಡಲಾಗಿದ್ದು, ಹೆಚ್ಚಿನ ಪೊಲೀಸರು ಬಂದೋಬಸ್ತ್ ನಲ್ಲಿ ನಿಯೋಜನೆಗೊಂಡಿದ್ದಾರೆ. ಈದ್ಗಾ ಮೈದಾನದ ಗಣೇಶನ ವಿಸರ್ಜನೆ ಬ್ಯೂಸಿ ಆಗಿದ್ದು, ಇದರಿಂದಾಗಿ ಗಸ್ತು ತಿರುಗಲು ಪೊಲೀಸರ ಕೊರತೆಯಾಗಿದೆ. ಇದನ್ನೆ ಬಂಡವಾಳಗಿಟ್ಟುಕೊಂಡು ಡಕಾಯಿತ ತಂಡ ಮನೆ ದರೋಡೆ ಮಾಡಿದೆ.
ಸ್ಥಳಕ್ಕೆ ಗೋಕುಲ ರೋಡ್ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕುಲ ರೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.