Posts Slider

Karnataka Voice

Latest Kannada News

ದೀಪಾ ಚೋಳನ್ ಕಾರ್ಯ ಶ್ಲಾಘಿಸಿದ ಜಗದೀಶ ಶೆಟ್ಟರ

1 min read
Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡು ಸರ್ವ ಶಿಕ್ಷಣ ಅಭಿಯಾನ ನಿರ್ದೇಶಕರಾಗಿ ತೆರಳುತ್ತಿರುವ ದೀಪಾ ಚೋಳನ್ ಅವರಿಗೆ ಇಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ, ಜಿಲ್ಲಾಧಿಕಾರಿ ದೀಪಾಚೋಳನ್ ಎರಡು ವರ್ಷಗಳ ಕಾಲ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ.  ಅತ್ಯಂತ ಕ್ಲಿಷ್ಟ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸಿದ ಹೆಗ್ಗಳಿಗೆ ಇವರದ್ದಾಗಿದೆ. ಧಾರವಾಡ ಕುಮಾರೇಶ್ವರ ಬಡಾವಣೆಯ ಕಟ್ಟಡ ದುರಂತ, ಅತಿವೃಷ್ಠಿಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ನಿರ್ವಹಣೆ ಇದಕ್ಕೆ ಉದಾಹರಣೆಯಾಗಿವೆ. ಆರಂಭದಿಂದಲೂ‌ ಜಿಲ್ಲೆಯನ್ನು ಕೊರೋನಾದಿಂದ ರಕ್ಷಿಸಲು ಹಗಲಿರುಳು ದುಡಿದಿದ್ದಾರೆ. ಬೇರೆ ಜಿಲ್ಲೆಗಳಿಗಿಂತ ಕೊರೋನಾ ಜಿಲ್ಲೆಯಲ್ಲಿ ನಿಯಂತ್ರಣದಲ್ಲಿ ಇರುವುದಕ್ಕೆ ಇವರ ಶ್ರಮ ಕಾರಣವಾಗಿದೆ. ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನ, ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗಳನ್ನು ಸಮರ್ಥವಾಗಿ ಆಯೋಜಿಸಿದ್ದಾರೆ. ಸರ್ವ ಶಿಕ್ಷಣ ಅಭಿಯಾನ ನಿರ್ದೇಶಕರಾಗಿ ಸೇವೆ ಸಲ್ಲಿಸುವುದರ ಮೂಲಕ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಅವಕಾಶ ಇವರಿಗೆ ಒದಗಿ ಬರಲಿ‌ ಎಂದು ಸಚಿವರು ಈ ಸಂದರ್ಭದಲ್ಲಿ ಹಾರೈಸಿದರು.

ಶಾಸಕ ಶಂಕರ ಪಾಟೀಲಮುನೇನಕೊಪ್ಪ, ಪ್ರದೀಪ ಶೆಟ್ಟರ, ಪ್ರಸಾದ ಅಬ್ಬಯ್ಯ ಹಾಗೂ ಅರವಿಂದ ಬೆಲ್ಲದ ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *