Posts Slider

Karnataka Voice

Latest Kannada News

ಹುಬ್ಬಳ್ಳಿಗೆ ಬಂದಿದ್ದಾರೆ ಪೊಲೀಸ್ ಮಹಾನಿರ್ದೇಶಕರು: ಖಾಸಗಿ ಹೊಟೇಲ್ ನಲ್ಲಿ ಮೀಟಿಂಗ್..

1 min read
Spread the love

ಹುಬ್ಬಳ್ಳಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹುಬ್ಬಳ್ಳಿಯ ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟ ಬೆನ್ನಲ್ಲೇ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ನಗರಕ್ಕೆ ಈಗಾಗಲೇ ಆಗಮಿಸಿದ್ದು, ನಗರದ ಖಾಸಗಿ ಹೊಟೇಲ್ ನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ.

ಬೆಳಿಗ್ಗೆ ವಿಮಾನದ ಮೂಲಕ ಆಗಮಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರನ್ನ ಹಿರಿಯ ಪೊಲೀಸ್ ಅಧಿಕಾರಿಗಳು ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು. ಅಲ್ಲಿಂದ ನೇರವಾಗಿ ಖಾಸಗಿ ಹೊಟೇಲ್ ಗೆ ಬಂದ ಸೂದ್ ಅವರು ಇನ್ನೇನು ಕೆಲವೇ ಹೊತ್ತಿನಲ್ಲಿ ಸಭೆಯನ್ನ ನಡೆಸಲಿದ್ದಾರೆ.

ಅವಳಿನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಸುಫಾರಿ ಕೊಲೆಯಂತ ಪ್ರಕರಣಗಳು ಪತ್ತೆಯಾಗಿರುವುದು ಹಲವರ ದುಗುಡಕ್ಕೆ ಕಾರಣವಾಗುತ್ತಿದೆ. ಅಷ್ಟೇ ಅಲ್ಲ, ಅವಳಿನಗರದ ನೆಮ್ಮದಿಯನ್ನ ಹಾಳು ಮಾಡಿದೆ ಎಂಬುದನ್ನ ಮನಗಂಡು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಆಯುಕ್ತರಿಗೆ ಈಗಾಗಲೇ ಖಡಕ್ ಎಚ್ಚರಿಕೆಯನ್ನ ನೀಡಿದ್ದಾರೆ.

ಇಂದಿನ ಸಭೆ ಮಹತ್ವದ್ದಾಗಿದ್ದು ಪೊಲೀಸ್ ಮಹಾನಿರ್ದೇಶಕರು ಅಧಿಕಾರಿಗಳಿಗೆ ಯಾವ ಸೂಚನೆಗಳನ್ನ ಕೊಡಲಿದ್ದಾರೆ. ಕ್ರೈಂ ನಡೆಯದಂತೆ ತಡೆಯುವ ಬಗ್ಗೆ ತೀಕ್ಷ್ಣವಾಗಿ ಹೇಳಲಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed