Karnataka Voice

Latest Kannada News

ಧಾರವಾಡದ ಬಳಿ ಸಾರಿಗೆ ಸಂಸ್ಥೆ ಬಸ್ ಪಲ್ಟಿ- ಮಹಿಳೆ ಸಾವು, ಹಲವರಿಗೆ ಗಾಯ, ಆಸ್ಪತ್ರೆಗೆ ರವಾನೆ…

Spread the love

ಧಾರವಾಡ: ನಗರದಿಂದ ಸವದತ್ತಿ ಕಡೆ ಹೋಗುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ಮರೇವಾಡದ ಬಳಿ ಸಂಭವಿಸಿದ್ದು, ಓರ್ವ ಮಹಿಳೆ ಸಾವಿಗೀಡಾಗಿದ್ದಾಳೆ.

ಘಟನೆಯಲ್ಲಿ 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರೆಲ್ಲರನ್ನ JK ಅಂಬ್ಯುಲೆನ್ಸ್ ಮೂಲಕ ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನಡೆಸಲಾಗಿದೆ.

ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.


Spread the love

Leave a Reply

Your email address will not be published. Required fields are marked *

You may have missed