Karnataka Voice

Latest Kannada News

Exclusive- ಧಾರವಾಡ ಜಿಲ್ಲಾಧಿಕಾರಿ ಸಭಾಭವನದ ಮೆಟ್ಟಿಲುಗಳ ಮೇಲೆ “ಕೈ-ಕುತ್ತಿಗೆಗೆ” ಚಾಕು ಇರಿದುಕೊಂಡ ನೌಕರ… ಆಸ್ಪತ್ರೆಗೆ ರವಾನೆ…

Spread the love

ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿರುವ ಸಭಾಭವನದ ಮೆಟ್ಟಿಲುಗಳ ಮೇಲೆ ನೌಕರನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಟೆಕ್ನಿಕಲ್ ಸೂಪರ್‌ವೈಸರ್ ಶಿವಪ್ರಸಾದ ಪಾಟೀಲ ಎಂಬಾತ ಕುತ್ತಿಗೆ ಹಾಗೂ ಕೈಗೆ ಇರಿದುಕೊಂಡಿದ್ದು, ತೀವ್ರ ರಕ್ತಸ್ರಾವವಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ, ತೀವ್ರ ಗಾಯಗೊಂಡಿದ್ದ ಶಿವಪ್ರಸಾದ ಪಾಟೀಲ ಅವರನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed