Posts Slider

Karnataka Voice

Latest Kannada News

ಧಾರವಾಡದಲ್ಲಿ ಸರಣಿಗಳ್ಳತನ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ, ಹಣ ಕಳ್ಳತನ..!

1 min read
Spread the love

ಧಾರವಾಡ: ನಗರದ ಕೋಳಿಕೇರಿ ಪ್ರದೇಶದಲ್ಲಿ ಮೂರು ಮನೆಗಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಹಣವನ್ನ ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ.

ಶಬಾ ಆಕಾಶ ಕಲಾಲ ಎಂಬುವವರ ಮನೆಯಲ್ಲಿ 3 ತೊಲೆ ಬಂಗಾರ, 50 ಸಾವಿರ ರೂಪಾಯಿ ಹಾಗೂ ಬೆಳ್ಳಿಯ ಆರತಿಗಳನ್ನ ಕದ್ದು ಪರಾರಿಯಾಗಿದ್ದಾರೆ. ಇನ್ನುಳಿದ ಎರಡು ಮನೆಗಳಲ್ಲೂ ಕಳ್ಳತನ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಅಲ್ಮೇರಾವನ್ನ ಒಡೆದು, ವಸ್ತುಗಳನ್ನ ದೋಚಿಕೊಂಡು ಪರಾರಿಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಧಾರವಾಡಕ್ಕೆ ಆಗಮಿಸಿದ್ದ ಪೊಲೀಸ್ ಕಮೀಷನರ್ ಲಾಬುರಾಮ್ ಅವರು, ಘಟನೆಯ ಬಗ್ಗೆ ಪೊಲೀಸರಿಗೆ ಖಡಕ್ಕಾಗಿ ವಾರ್ನಿಂಗ್ ಮಾಡಿದ್ದಾರೆ.

ಸರಣಿ ಕಳ್ಳತನದಿಂದ ಪ್ರದೇಶದ ಜನರು ಆತಂಕದಲ್ಲಿ ಮುಳುಗಿದ್ದು, ಶಹರ ಠಾಣೆಯ ಪೊಲೀಸರು ಮಾಹಿತಿಯನ್ನ ಕಲೆ ಹಾಕುವ ಯತ್ನ ಮಾಡುತ್ತಿದ್ದಾರೆ. ಸ್ಥಳೀಯ ಪ್ರದೇಶದಿಂದ ಕಳ್ಳತನ ಮಾಡಿ ಹೋಗಿರಬಹುದಾದ ಸ್ಥಳದಲ್ಲಿ ಸಿಸಿಟಿವಿ ಇವೇಯಾ ಎಂಬುದರ ಬಗ್ಗೆಯೂ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *