Posts Slider

Karnataka Voice

Latest Kannada News

ಧಾರವಾಡ ‘ಯುಬಿ ಹಿಲ್’ಬಳಿ ಅಪಘಾತ: ಯುವಕ ಸಾವು, ಮತ್ತೋರ್ವನ ಸ್ಥಿತಿ ಚಿಂತಾಜನಕ

Spread the love

ಧಾರವಾಡ: ನಗರದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದ ಬಳಿ ವೇಗವಾಗಿ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ, ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೋರ್ವ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ಧಾರವಾಡ ಗೌಳಿಗಲ್ಲಿಯ ರಾಜು ಗುಡ್ಡು ಹಂಚಿವಾಲೆ ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಯುವಕನನ್ನ ಮಂದಾರ ಶಿಂಧೆ ಎಂದು ಗುರುತಿಸಿಲಾಗಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಎಮ್ಮಿಕೇರಿಯಿಂದ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಬರುತ್ತಿದ್ದ ಯುವಕರಿಬ್ಬರು, ಬೈಕಿನ ನಿಯಂತ್ರಣ ತಪ್ಪಿ ಯುಬಿ ಹಿಲ್ 5ನೇ ಅಡ್ಡರಸ್ತೆಯ ನಾಮಫಲಕಕ್ಕೆ ಡಿಕ್ಕಿ ಹೊಡೆದಿದೆ. ಕೆಲವೇ ನಿಮಿಷಗಳಲ್ಲಿ ಆಗಮಿಸಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು, ಇಬ್ಬರನ್ನೂ ಉಳಿಸುವ ಉದ್ದೇಶದಿಂದ ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಿದರಾದರೂ, ರಾಜು ಎಂಬಾತ ಮಾರ್ಗ ಮಧ್ಯದಲ್ಲಿ ಸಾವಿಗೀಡಾದ.

ಪ್ರಕರಣ ಧಾರವಾಡ ಸಂಚಾರಿ ಠಾಣೆಯಲ್ಲಿ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಲಾಗಿದೆ.


Spread the love

Leave a Reply

Your email address will not be published. Required fields are marked *