ಸಹಸ್ರಾರು “ಭಕ್ತರ” ಸಾಕ್ಷಿಯಾಗಿ ನಾಮಪತ್ರ ಸಲ್ಲಿಸಿದ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು….
1 min readಧಾರವಾಡ: ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಇಂದು ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರವನ್ನ ಸಲ್ಲಿಕೆ ಮಾಡಿದರು.
ಧಾರವಾಡ ಜಿಲ್ಲೆಯ ಹಲವು ಲಿಂಗಾಯತ ನಾಯಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡುತ್ತಲೇ, ಸ್ವತಃ ಮಹಾಸ್ವಾಮಿಗಳು ಅಖಾಡದಲ್ಲಿ ಧುಮುಕಿದ್ದಾರೆ.
ವೀಡಿಯೋ…
ಶ್ರೀಗಳು ಅಖಾಡದಲ್ಲಿ ಇರುವುದರಿಂದ ಬಿಜೆಪಿಗೆ ಹಿನ್ನೆಡೆಯಾಗತ್ತೆ, ಕಾಂಗ್ರೆಸ್ ಪಕ್ಷಕ್ಕೂ ಅನಾನುಕೂಲ ಆಗತ್ತೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮತದಾರ ಏನು ನಿರ್ಣಯ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ.