Posts Slider

Karnataka Voice

Latest Kannada News

ವೆಬ್‌ಸೈಟ್ ನೋಡಿ ಇಲ್ಲಿಗೆ ಬಂದೆ: ಸಚಿವ ಸುರೇಶಕುಮಾರ ಧಾರವಾಡದಲ್ಲಿ ಹೇಳಿಕೆ

Spread the love

ಪಾರ್ಶ್ವವಾಯು ಪೀಡಿತ ಶಿಕ್ಷಣಾಧಿಕಾರಿ ಮಹದೇವ ಮಾಳಗಿ ನಿವಾಸಕ್ಕೆ ಸಚಿವ ಎಸ್.ಸುರೇಶಕುಮಾರ್ ಭೇಟಿ,
ಯೋಗಕ್ಷೇಮ ವಿಚಾರಣೆ

ಸ್ವಯಂ ನಿವೃತ್ತಿ ಆದೇಶ ಹಸ್ತಾಂತರ: ಶೀಘ್ರ ನಿವೃತ್ತಿಯ ಎಲ್ಲಾ ಸೌಲಭ್ಯಗಳು: ಅನುಕಂಪ ಆಧಾರಿತ ನೌಕರಿ ಸಚಿವ ಸಂಪುಟಸಭೆಯಲ್ಲಿ ನಿರ್ಧಾರ – ಎಸ್.ಸುರೇಶ ಕುಮಾರ್

ಧಾರವಾಡ: ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ಇಲ್ಲಿನ ನಿಸರ್ಗ ಲೇಔಟ್ ನಿವಾಸಕ್ಕೆ ಪ್ರಾಥಮಿಕ ,ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ್ ಅವರು ಇಂದು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ, ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು ಹಸ್ತಾಂತರಿಸಿದರು.

1999 ಬ್ಯಾಚಿನ ಕೆಇಎಸ್ ಅಧಿಕಾರಿಯಾಗಿರುವ ಮಹದೇವ ಮಾಳಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಯಟ್ ಹಿರಿಯ ಉಪನ್ಯಾಸಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ‌‌.2015 ರ ಜನವರಿ 15 ರಂದು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವುದರಿಂದ , ಅವರ ದೈಹಿಕ ಸಾಮರ್ಥ್ಯ ಇಲ್ಲದಿರುವದನ್ನು ಪರಿಗಣಿಸಿ ಸರ್ಕಾರ ಸ್ವಯಂ ನಿವೃತ್ತಿ ಆದೇಶ ನೀಡಿದೆ.ಇದರಿಂದ ಅವರಿಗೆ ನಿವೃತ್ತಿ ನಂತರದ ಎಲ್ಲಾ ಸೌಲಭ್ಯಗಳು ದೊರೆಯಲಿವೆ.ಕುಟುಂಬದ ಸದಸ್ಯರು ಅನುಕಂಪ ಆಧಾರಿತ ನೌಕರಿಗೆ ಮನವಿ ಮಾಡಿದ್ದಾರೆ, ಇದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಬೇಕಾದ ವಿಷಯವಾಗಿರುವದರಿಂದ ಮುಂಬರುವ ದಿನಗಳಲ್ಲಿ ವಿಷಯವನ್ನು ಸಭೆಗೆ ಮಂಡಿಸಲು ತಮ್ಮ ಶಕ್ತಿಮೀರಿದ ಪ್ರಯತ್ನ ಮಾಡುತ್ತೇನೆ, ಮುಖ್ಯಮಂತ್ರಿಗಳು ಈ ಕುರಿತು ನಿರ್ಣಯ ಕೈಗೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ಸಚಿವರಾದ ಎಸ್.ಸುರೇಶಕುಮಾರ್ ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ ಮಾತನಾಡಿ, ಅಧಿಕಾರಿಯ ವೈದ್ಯಕೀಯ ವೆಚ್ಚದ ಮರುಪಾವತಿಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.

ಮಹದೇವ ಮಾಳಗಿ ಅವರ ಪತ್ನಿ ಪ್ರಭಾವತಿ, ಮಕ್ಕಳಾದ ಸಮೀಕ್ಷಾ, ಸಂಪದಾ ತಮ್ಮ ಸಂಕಷ್ಟಗಳನ್ನು ಸಚಿವರಿಗೆ ನಿವೇದಿಸಿಕೊಂಡರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ವಿ.ಸಂಕನೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ‌.ಖಾಜಿ,ಉಮೇಶ್ ಬೊಮ್ಮಕ್ಕನವರ ಮತ್ತಿತರರು ಇದ್ದರು.


Spread the love

Leave a Reply

Your email address will not be published. Required fields are marked *