ಮಗ ಭರತನಿಗೆ ಟಿಕೆಟ್ ಪಡೆಯುವಲ್ಲಿ ಸಫಲರಾದ ಬಸವರಾಜ ಬೊಮ್ಮಾಯಿ…!!!

ನವದೆಹಲಿ: ಉಪಚುನಾವಣೆಯ ಅಭ್ಯರ್ಥಿಗಳನ್ನ ಭಾರತೀಯ ಜನತಾ ಪಕ್ಷವೂ ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರನಿಗೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಸಂಸದರಾದ ನಂತರ ತೆರವಾಗಿದ್ದ ಶಿಗ್ಗಾಂವ ಕ್ಷೇತ್ರಕ್ಕೆ ಭರತ ಬೊಮ್ಮಾಯಿ ಅವರನ್ನ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಶಿಗ್ಗಾಂವ ಕ್ಷೇತ್ರದಲ್ಲಿ ತಮ್ಮದೇಯಾದ ಛಾಪನ್ನ ಹೊಂದಿರುವ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರವನ್ನ ಶತಾಯಗತಾಯ ಉಳಿಸಿಕೊಳ್ಳುವ ಉದ್ದೇಶ ಹೊಂದಿದ್ದರು. ಇದರಲ್ಲಿ ಈಗ ಮೊದಲ ಯಶಸ್ಸು ಹೊಂದಿದ್ದಾರೆ.