ನಿವೃತ್ತ ಶಿಕ್ಷಕ ತಂದೆಯನ್ನ ಹತ್ಯೆ ಮಾಡಿ, ಗೋಣಿಚೀಲದಲ್ಲಿ ಹಾಕಿ ರಸ್ತೆ ಬದಿ ಎಸೆದಿದ್ದ “ಮಗಳು”…
ಅನೈತಿಕ ಸಂಬಂಧಕ್ಕೆ ಅಡ್ಡಿ; ನಿವೃತ್ತ ಶಿಕ್ಷಕ ತಂದೆಯನ್ನೇ ಕೊಂದ ಮಗಳು
ವಿಜಯಪುರ: ಅನೈತಿಕ ಸಂಬಂಧ ಹಾಗೂ ಆಸ್ತಿ ವಿಚಾರಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪುತ್ರಿಯೇ ಪ್ರಿಯಕರನೊಂದಿಗೆ ಸೇರಿ ನಿವೃತ್ತ ಶಿಕ್ಷಕ ತಂದೆಯನ್ನು ಹತ್ಯೆ ಮಾಡಿರುವ ಘಟನೆ ಇಂಡಿ ತಾಲೂಕಿನ ಚೌಡಿಹಾಳ ಬಳಿ ನಡೆದಿದೆ.
62 ವರ್ಷದ ಸಿದ್ದಪ್ಪ ಅಂಜುಟಗಿ ಮೃತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಸಂತೋಷನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಗುರುರಾಜನಿಗಾಗಿ ಶೋಧ ಮುಂದುವರಿದಿದೆ.
ಆಸ್ತಿ ವಿಚಾರವಾಗಿ ತಂದೆ-ಮಗಳ ನಡುವೆ ಗಲಾಟೆ ನಡೆದ ಬಳಿಕ, ಪ್ರಿಯಾಂಕಾ ಪ್ರಿಯಕರನಿಗೆ ಕರೆ ಮಾಡಿ ಮನೆಗೆ ಕರೆಯಿಸಿಕೊಂಡಿದ್ದಳು ಎನ್ನಲಾಗಿದೆ. ಬಳಿಕ ಆರೋಪಿಗಳು ಸಿದ್ದಪ್ಪ ಅವರನ್ನು ಹತ್ಯೆ ಮಾಡಿ ಮೃತದೇಹವನ್ನು ರಸ್ತೆ ಬದಿ ಎಸೆದು ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.
