Posts Slider

Karnataka Voice

Latest Kannada News

ಹೆಬ್ಬಳ್ಳಿಯಲ್ಲಿ ಆತ್ಮಹತ್ಯೆಗೆ ಶರಣಾದ ಶಿವಪ್ಪ…!

Spread the love

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಸಾಲದ ಶೂಲಕ್ಕೆ ಬೆದರಿದ ರೈತನೋರ್ವ ನೇಣು ಬಿಗಿದುಕೊಂಡು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಹೆಬ್ಬಳ್ಳಿಯ ಶಿವಪ್ಪ ರತ್ನಪ್ಪ ಶಿವಳ್ಳಿ ಎಂಬುವವರೇ ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾರೆ. ಮೂರು ಲಕ್ಷ ರೂಪಾಯಿ ಸಾಲ ಮಾಡಿಕೊಂಡು, ತೀರಿಸಲಾಗದೇ ಮಾನಸಿಕವಾಗಿ ನೊಂದು ಸಾವಿಗೆ ಶರಣಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

ರೈತನ ಸಾವಿಗೆ ನಿಖರವಾದ ಕಾರಣವನ್ನ ಪೊಲೀಸರು ಮಾಹಿತಿಯನ್ನ ಕಲೆ ಹಾಕುತ್ತಿದ್ದು, ಇದಾದ ನಂತರ ಮುಂದಿನ ಕಾನೂನು ಕ್ರಮವನ್ನ ಜರುಗಿಸಲಿದ್ದಾರೆ.


Spread the love

Leave a Reply

Your email address will not be published. Required fields are marked *