Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ: ಓರ್ವನ ಬಂಧನ, ಮತ್ತಿಬ್ಬರು ಪರಾರಿ…!

ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯ ಅರಳಿಕಟ್ಟಿ ಓಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿದ್ದು, ಓರ್ವನ ಬಂಧನವಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.

ಗುರುರಾಜ ಕುರುಬರ ಎಂಬಾತನನ್ನ ಬಂಧನ ಮಾಡಲಾಗಿದ್ದು, ಇನ್ನಿಬ್ಬರ ಬಗ್ಗೆ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ. ಬಂಧಿತನಿಂದ 568 ಗ್ರಾಂ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಗಾಂಜಾದ ಮೌಲ್ಯ 34080 ರೂ. ಎಂದು ಅಂದಾಜಿಸಲಾಗಿದೆ.

ಪರಾರಿಯಾದ ಇನ್ನಿಬ್ಬರ ಪತ್ತೆಗಾಗಿ ಜಾಲ ಬೀಸಲಾಗಿದೆ. ಶಹರ ಠಾಣೆ ಪೊಲೀಸ್ ಇನ್ಸಪೆಕ್ಟರ್ ಆನಂದ ಒನಕುದರಿ ನೇತೃತ್ವದಲ್ಲಿ ಸಿಬ್ಬಂದಿಗಳು ಆರೋಪಿಯನ್ನ ಬಂಧನ ಮಾಡಲಾಗಿದೆ.

Leave a Reply

Your email address will not be published. Required fields are marked *