ಸರಕಾರಿ ಶಾಲೆಯ ಪಕ್ಕದಲ್ಲೇ ಗಾಂಜಾ ಮಾರಾಟ: ಸೋಮಶೇಖರ ಬಂಧನ..!

ಧಾರವಾಡ: ತೇಜಸ್ವಿನಗರದ ಸರಕಾರಿ ಉರ್ದು ಶಾಲೆಯ ಹತ್ತಿರವೇ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧನ ಮಾಡುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಗೌಂಡಿ ಕೆಲಸ ಮಾಡುತ್ತಿದ್ದ ಸೋಮಶೇಖರ ಅಲಿಯಾಸ್ ಶಾಂತರಾಮ ವಸಂತ ತೋಡಕರ ಎಂಬಾತನೇ ಗಾಂಜಾವನ್ನ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ, ಆರೋಪಿಯನ್ನ ಬಂಧನ ಮಾಡಿದ್ದಾರೆ.
ಬಂಧಿತ ಆರೋಪಿಯಿಂದ 890 ಗ್ರಾಂ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಅಂದಾಜು 40 ವಯಸ್ಸಿನ ಸೋಮಶೇಖರ, ನಿರಂತರವಾಗಿ ಈ ದಂಧೆಯಲ್ಲಿ ತೊಡಗಿದ್ದನೆಂದು ಮಾಹಿತಿಯಿತ್ತಾದರೂ, ಆರೋಪಿ ಸಿಕ್ಕಿಬಿದ್ದಿರಲಿಲ್ಲ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಎಂ.ಕೆ.ಬಸಾಪುರ ನೇತೃತ್ವದಲ್ಲಿ ಪಿಎಸ್ಐಗಳಾದ ಸಚಿನಕುಮಾರ ದಾಸರೆಡ್ಡಿ, ಎಸ್.ಆರ್.ತೇಗೂರ ಹಾಗೂ ಸಿಬ್ಬಂದಿಗಳಾದ ಎ.ಬಿ.ನರೇಂದ್ರ, ಎಂ.ಎಫ್.ನದಾಫ, ಬಿ.ಎಂ.ಪಠಾತ್ ಆರೋಪಿಯನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.