Posts Slider

Karnataka Voice

Latest Kannada News

ಹುಬ್ಬಳ್ಳಿಯ ದೇವಸ್ಥಾನದಲ್ಲಿ ಗ್ಯಾಸ್ ಸಿಲೆಂಡರ್ ಸ್ಪೋಟ….!!!

Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ದೇವಸ್ಥಾನ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ದೇವಸ್ಥಾನದ ಅರ್ಚಕ ಸೇರಿದಂತೆ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ಈಗಷ್ಟೇ ನಡೆದಿದೆ.

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಕರಿಯಮ್ಮ ದೇವಸ್ಥಾನದಲ್ಲಿ ಈ ಅವಘಡ ಸಂಭವಿಸಿದೆ,ಕರಿಯಮ್ಮ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾದಾರಿಗಳು ಸನ್ನಿಧಿಯನ್ನು ಮಾಡಿಕೊಂಡಿದ್ದರು,ಈ ಸನ್ನಿಧಿಯಲ್ಲಿ ತಮ್ಮ ಉಪಹಾರ ಹಾಗೂ ಊಟವನ್ನು ಮಾಡಿಕೊಳ್ಳುವ ಸಲುವಾಗಿ ಸಿಲಿಂಡರ್ ಉಪಯೋಗ ಮಾಡಲಾಗುತ್ತಿತ್ತು.

ಆದ್ರೆ ಇಂದು ಬೆಳ್ಳಿಗ್ಗೆ 11 ಗಂಟೆಯ ಸುಮಾರಿಗೆ ದೇವಸ್ಥಾನದ ಅರ್ಚಕ ಪ್ರಶಾಂತ ಹಿರೇಮಠ್ ಎಂಬುವರು ದೇವಸ್ಥಾನದಲ್ಲಿದ್ದ ಅಯ್ಯಪ್ಪ ಸ್ವಾಮಿಯ ಸನ್ನಿಧಿಯನ್ನು ತೆಗೆದ ಕೂಡಲೇ ಏಕಾಏಕಿ ಸಿಲಿಂಡರ್ ಬ್ಲಾಸ್ಟ್ ಆಗಿದೆ.

ಈ ವೇಳೆ ದೇವಸ್ಥಾನದ ಪೂಜಾರಿ ಪ್ರಶಾಂತ ಹಿರೇಮಠ ಸೇರಿದಂತೆ ದೇವಸ್ಥಾನಕ್ಕೆಂದು ಬಂದಿದ್ದ ಐಶ್ವರ್ಯ ಹಾಗೂ ಸರಸ್ವತಿ ಎಂಬುವರಿಗೆ ಗಂಭೀರ ಗಾಯವಾಗಿದ್ದು,ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು,ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed