Posts Slider

Karnataka Voice

Latest Kannada News

ನೀರಲ್ಲಿ ಕೊಚ್ಚಿ ಹೋದ ಬಾಲಕಿ ಶವವಾಗಿ ಪತ್ತೆ: ಮೂರುದಿನದ ಕಾರ್ಯಾಚರಣೆ

Spread the love

ಧಾರವಾಡ: ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ.ಅಂತರದಲ್ಲಿ ಪತ್ತೆಯಾಗಿದೆ.

ಅಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು. ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಬಾಲಕಿಯ ದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಬಾಲಕಿಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಆತುರದ ನಿರ್ಧಾರ ಬೇಡ

ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರು , ಗ್ರಾಮೀಣ ಭಾಗದ ನಿವಾಸಿಗಳು ತುಂಬಿ ಹರಿಯುವ ಹಳ್ಳ,ಕೊಳ್ಳಗಳನ್ನು ರಭಸದ ಸಂದರ್ಭದಲ್ಲಿ ದಾಟಲು ಆತುರ ಪಡಬಾರದು ಎಂದು ಜಿಲ್ಲಾಧಿಕಾರಿ  ಮನವಿ ಮಾಡಿದ್ದಾರೆ.

ನೀರು ಇಳಿಮುಖವಾಗುವವರೆಗೂ ತಾಳ್ಮೆಯಿಂದ ಇರಬೇಕು, ಸ್ಥಳೀಯ ಸ್ವಯಂ ಸೇವಕರು, ಅತಿವೃಷ್ಟಿ ನಿರ್ವಹಣಾ ಸಿಬ್ಬಂದಿಯ ನೆರವು ಪಡೆಯಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *