ನವೆಂಬರ್ ತನಕ ಉಚಿತ ಪಡಿತರ: ಸಚಿವ ಗೋಪಾಲಯ್ಯ ಘೋಷಣೆ
1 min readಬೆಂಗಳೂರು: ಮೋದಿ ಅವರು ಇವತ್ತು ಪುನಃ ಪಡಿತರ ವ್ಯವಸ್ಥೆಯಲ್ಲಿ ತೊಂದರೆ ಆಗಬಾರದು ಎಂದು ತೀರ್ಮಾನ ಮಾಡಿದ್ದಾರೆ. ಮೋದಿ ಅವರಿಗೆ, ಸಿಎಂ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದ ದೇಶದ ಜನ ಹಸಿವಿನಿಂದ ಇರಬಾರದು ಎಂದು ತೀರ್ಮಾನ ಮಾಡಿದ್ದಾರೆ. ಇದೇ ಕಾರಣಕ್ಕೆ ಉಚಿತ ಪಡಿತರವನ್ನು ನವೆಂಬರ್ ವರೆಗೂ ನೀಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಗೋಪಾಲಯ್ಯ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಗೋಪಾಲಯ್ಯ, ಇವತ್ತು ಮತ್ತೇ ಪಡಿತರ ವ್ಯವಸ್ಥೆಯಲ್ಲಿ ತೊಂದರೆಯಾಗಬಾರದು, ನವೆಂಬರ್ ವರೆಗೂ ಪಡಿತರ ನೀಡುವಂತೆ ಪ್ರಧಾನಿ ಹೇಳಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಪ್ರಿಲ್, ಮೇ ತಿಂಗಳಲ್ಲಿ ನೀಡಿದಂತೆ ನವೆಂಬರ್ ವರೆಗೂ ಉಚಿತ ಪಡಿತರ ನೀಡುತ್ತೇವೆ ಎಂದರು.