Posts Slider

Karnataka Voice

Latest Kannada News

ವಂಚನೆ ಪ್ರಕರಣ : ಗೋಪಾಲ್ ಜೋಶಿ ವಿರುದ್ದದ ಕೇಸ್​​​​ ತನಿಖೆಗೆ ತಡೆ ನೀಡಿದ ಹೈಕೋರ್ಟ್..!

Spread the love

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಹೋದರನಿಗೆ ಬಿಗ್​ ರಿಲೀಫ್ ಸಿಕ್ಕಿದೆ.

ಪ್ರಕರಣ ರದ್ದು ಕೋರಿ ಗೋಪಾಲ ಜೋಶಿ ಪರ ಹೈಕೋರ್ಟ್‌ನ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುರುವಾರ ಮೆಮೊ ಸಲ್ಲಿಸಿದರು.

File image

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಗೋಪಾಲ್ ಜೋಶಿ ವಿರುದ್ದದ ಕೇಸ್​​​​ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ದಾಖಲೆಗಳ ಪರಿಶೀಲಿಸಿ ನ್ಯಾ.ಎಂ .ನಾಗಪ್ರಸನ್ನ ಕೇಸ್​​​ಗೆ ತಡೆ ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *