Posts Slider

Karnataka Voice

Latest Kannada News

ಮೂರೇ ಗಂಟೆಯಲ್ಲಿ ಆರೋಪಿಗಳ ಹೆಡಮುರಿಗೆ ಕಟ್ಟಿದ ಎಸಿಪಿ ವಿನೋದ ಮುಕ್ತೆದಾರ ಪಡೆ…!

1 min read
Spread the love

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನ ಬರ್ಭರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನ ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ.

ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.

ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನ ಎಸಿಪಿ ವಿನೋದ ಮುಕ್ತೆದಾರ ನೇತೃತ್ವದ ತಂಡ ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕೆಲವು ದಿನಗಳ ಹಿಂದೆ ಅಭಿಷೇಕನೊಂದಿಗೆ ಜಗಳವಾಡಿದ್ದ ಪ್ರವೀಣ ಬೇವಿನಕಟ್ಟಿ, ಪಾಟೀಲರ ಮನೆಯ ಮುಂದಿನ ಕಾರಿನ ಗಾಜನ್ನ ಒಡೆದು ಹೋಗಿದ್ದ. ಅದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗುತ್ತಿತ್ತು. ಅದೇ ಕಾರಣದಿಂದಲೇ ನಿನ್ನೆಯೂ ಕೂಡಾ ಜಗಳವಾಗಿದೆ. ತಕ್ಷಣವೇ ಸಾಯಿ ಮತ್ತು ಕುಮಾರನನ್ನ ಕಳಿಸಿ ಕೊಲೆ ಮಾಡಿಸಿದ್ದಾನೆಂದು ಗೊತ್ತಾಗಿದೆ.

ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ ಎಸಿಪಿ ವಿನೋದ ಮುಕ್ತೆದಾರ ತಂಡವೂ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೂರೇ ಗಂಟೆಯಲ್ಲಿ ಹಿಡಿದು, ಪೊಲೀಸರೆಂದರೇನು ಎಂದು ತೋರಿಸಿಕೊಟ್ಟಿದ್ದಾರೆ.

ಅಶೋಕನಗರದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತಷ್ಟು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed