Posts Slider

Karnataka Voice

Latest Kannada News

ಬಿಜೆಪಿ MLA, EO ಕಿರುಕುಳ ಆರೋಪ: ಆತ್ಮಹತ್ಯೆಗೆ ಶರಣಾದ ಗ್ರಾಪಂ ಸಿಬ್ಬಂದಿ..

1 min read
Spread the love

ಡೆತ್‌ನೋಟಿನಲ್ಲಿ ಬಿಜೆಪಿ ಶಾಸಕರ ಹೆಸರು

ಇಓ ಮಾಡಿದ ನರಕವೇನು

ಚಿತ್ರದುರ್ಗ: ಶಾಸಕನ ಹೆಸರು ಡೆತ್ ನೋಟ್ ನಲ್ಲಿ ಬರೆದಿಟ್ಟು ಗ್ರಾಮ ಪಂಚಾಯತ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಉಪ್ಪರಿಗೇನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದ್ದು, ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಎಸ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರೆಂದು ಗೊತ್ತಾಗಿದೆ.

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪನವರ ಒತ್ತಡ, ಸಸ್ಪೆಂಡ್ ಮಾಡುವ ಬೆದರಿಕೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.

ಉಪ್ಪರಿಗೇನಹಳ್ಳಿಯ ಮೋಹನ್ ಕುಮಾರ್, ಮೂರ್ತಿ, ಉಗ್ರಪ್ಪ, ರಾಜಪ್ಪ ಹಾಗೂ 30 ಜನ ಸ್ನೇಹಿತರು ತಮ್ಮನ್ನ ಬೆದರಿಸಿ ಖಾತೆ ಮಾಡಿಸಿಕೊಂಡಿದ್ದಾರೆ ಅಲ್ಲದೆ ಎಸ್ಸಿಗಳಿಗೆ ಮಾತ್ರ ಕೆಲಸ ಮಾಡಿಕೊಡು ಅಂತಾ ಪಿಡಿಓ ಮೂಲಕ ಹಿಂಸೆ ಮಾಡ್ತಿದ್ರು ಎಂದು ಉಲ್ಲೇಖ ಮಾಡಲಾಗಿದೆ.

ಈ ಕುರಿತು ತಾಲೂಕಾ ಪಂಚಾಯತ ಇಓ ಮೇಲೆ ತನಿಖೆಯಾಗಬೇಕೆಂದು ಡೆತ್ ನೋಟಲ್ಲಿ ಉಲ್ಲೇಖಿಸಲಾಗಿದೆ ಹಾಗೂ ಲಿಂಗಾಯತರು ಕೆಲಸ ಮಾಡುವುದು ಕಷ್ಟವಾಗುತ್ತಿದೆ ಎಂದು ಡೆತ್ ನೋಟಿನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಕುರಿತಂತೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *