ಹಾರೋಬೆಳವಡಿ ಬಳಿ ಭೀಕರ ಅಪಘಾತ- ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ…

ಧಾರವಾಡ: VRL ಲಾರಿ ಹಾಗೂ ಅಶೋಕ ಲೈಲ್ಯಾಂಡ್ ಲಾರಿಯ ನಡುವೆ ಶುಕ್ರವಾರ ಬೆಳಗಿನ ಜಾವ ನಡೆದಿರುವ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮತ್ತೋರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ.

ಧಾರವಾಡದಿಂದ ಸವದತ್ತಿಗೆ ಹೋಗುತ್ತಿದ್ದ ಲಾರಿಗೆ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಚಾಲಕರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಎರಡು ಲಾರಿಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರ ಶವಗಳು ಲಾರಿಯಲ್ಲಿ ಸಿಲುಕಿವೆ.

ಮೃತಪಟ್ಟವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಘಟನೆಯಿಂದ ಧಾರವಾಡ ಸವದತ್ತಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಲಾರಿಯನ್ನ ಕ್ಲಿಯರ್ ಮಾಡಬೇಕಾಗಿದೆ.