ಹೆಬ್ಬಳ್ಳಿಯಲ್ಲಿ “ಜೆಜೆಎಂ ಕಾಮಗಾರಿ ಪೈಪ್”ಗೆ ಬೆಂಕಿ: ಹತ್ತಿದ್ದೋ… ಹಚ್ಚಿದ್ದೋ….!?

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಗ್ರಾಮದ ಹೊರವಲಯದ ಮನೆಯೊಂದರ ಬಳಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಪೈಪ್ ಗಳಿಗೆ ಶನಿವಾರ ಬೆಳಗಿನ ಜಾವ ಬೆಂಕಿ ತಗುಲಿದ್ದು, ಹಲವು ಸಂಶಯಗಳಿಗೆ ಕಾರಣವಾಗಿದೆ.

ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೂ ಬೆಂಕಿ ತಗುಲಿದ್ದು, ಕಟ್ಟಡಕ್ಕೂ ಹಾನಿಯುಂಟಾಗಿದೆ. ಪೈಪ್ ಗಳಿಗೆ ಬೆಂಕಿ ತಗುಲಿದ್ದು ಯಾವ ಕಾರಣಕ್ಕೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.

ಬೆಂಕಿಯನ್ನ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಐನಾಪುರ ಎಂಬ ಗುತ್ತಿಗೆದಾರ ಇಲ್ಲಿನ ಜೆಜೆಎಂ ಕಾಮಗಾರಿಯನ್ನ ಮಾಡುತ್ತಿದ್ದಾರೆಂದು ಗೊತ್ತಾಗಿದೆ.