ಹೆಬ್ಬಳ್ಳಿಯಲ್ಲಿ ಮಳೆಗೆ ಬಿದ್ದ ಮನೆ… ಪ್ರಾಣಾಪಾಯದಿಂದ ಪಾರಾದ ದಂಪತಿಗಳು…

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯೊಂದು ಕುಸಿದು ಬಿದ್ದ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದ್ದು, ದಂಪತಿಗಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳೆದ ಹದಿಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಇದರಿಂದ ಮನೆ ಕುಸಿದಿದೆ. ಇದೇ ಸಮಯದಲ್ಲಿ ಮನೆಯಲ್ಲಿದ್ದ ಶ್ರೀಶೈಲ ಸಾತಣ್ಣನವರ ಹಾಗೂ ಇವರ ಪತ್ನಿ ಸವಿತಾ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೂ ಗಾಯಗಳಾಗಿದ್ದು ಅವರನ್ನ ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆಯ ಬಗ್ಗೆ ಪೊಲೀಸರು ಮಾಹಿತಿಯನ್ನ ಪಡೆದುಕೊಂಡಿದ್ದಾರೆ.