Posts Slider

Karnataka Voice

Latest Kannada News

ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಕಚೇರಿಯಲ್ಲಿ ಶಾಂತಿ ಹೋಮ: ಡಿಕೆಶಿ-ಖಂಡ್ರೇ ಭಾಗಿ

1 min read
Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷಗಿರಿ ವಹಿಸಿಕೊಂಡು ಅಧಿಕಾರ ಸ್ವೀಕರಿಸುವ ಮುನ್ನವೇ ಶಾಂತಿ ಹೋಮ ಮಾಡಿಸುತ್ತಿರುವ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.

ಕಾಂಗ್ರೆಸ್ ಗೆ ಹಾಗೂ ಪಕ್ಷದ ಕಚೇರಿಗೆ ಒಳ್ಳೆಯದಾಗ್ಲಿ ಎಂದು ಶಾಂತಿ ಹೋಮ ನಡೆಸಲಾಗುತ್ತಿದೆ. ಜೊತೆಗೆ ಪಕ್ಷದ ಹೊಸ ಕಚೇರಿ ಕೆಲಸ ಎರಡು ವರ್ಷಗಳಿಂದ ನಿಂತು ಹೋಗಿದ್ದು. ಹೊಸ ಕಚೇರಿ ಕೆಲಸ ಕಾರ್ಯಗಳು ಮತ್ತೆ ಆರಂಭ ಆಗಿವೆ. ಹೊಸ ಕಟ್ಟಡದ ಕೆಲಸ ಕಾರ್ಯಗಳಿಗೆ ಡಿಕೆ ಶಿವಕುಮಾರ್ ಚಾಲನೆ ನೀಡುತ್ತಿದ್ದಾರೆ. ಅದಕ್ಕೂ ಮುನ್ನ ಕೆಪಿಸಿಸಿ ನೂತನ ಕಟ್ಟಡದಲ್ಲಿ ವಿಶೇಷ ಶಾಂತಿ ಹೋಮ ಮಾಡಿಸುತ್ತಿರುವ ಡಿಕೆ ಶಿವಕುಮಾರ್. ಮುಂಜಾನೆ ಮೂರು ಗಂಟೆಯಿಂದ ಹೋಮ ಕಾರ್ಯ ಪ್ರಾರಂಭವಾಗಿದ್ದು ಬೆಳಗ್ಗೆ 10 ಗಂಟೆವರೆಗೂ ಹೋಮ ಕಾರ್ಯ ನಡೆಯಿತು.

ಪೂಜೆಯಲ್ಲಿ ಭಾಗಿಯಾದ ನಂತರ ಕೆಪಿಸಿಸಿ ಕಛೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

ಎಲ್ಲಾ ವಿಘ್ನಗಳನ್ನ ನಿವಾರಣೆ ಮಾಡ್ಲಿ ಅಂತ ಶುಭ ಮೂಹೂರ್ತದಲ್ಲಿ ಪೂಜೆ ಶುರು ಮಾಡಿದ್ದೇವೆ. ಎರಡು ವರ್ಷಗಳಿಂದ ಬಿಲ್ಡಿಂಗ್ ಕೆಲಸ ನಿಂತಿತ್ತು. ಎಲ್ಲರ ಒಳಿತಿಗಾಗಿ ಮಾಡುತ್ತಿರುವ ಹೋಮ ಇದು. ರಾಜ್ಯಕ್ಕೆ,  ನಮ್ಮ ಪಕ್ಷದ  ನಾಯಕರು, ಕಾರ್ಯಕರ್ತರಿಗೆ ಒಳ್ಳೇದ್ ಆಗ್ಲಿ ಎಂದು ಹೋಮಾ ಮಾಡ್ತಿದ್ದೀವಿ. ರಾಜ್ಯ ಆದಷ್ಟು ಬೇಗ ಕೊರೋನಾದಿಂದ ಮುಕ್ತವಾಗಲಿ. ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ವಿಚಾರ.  ಸದ್ಯದಲ್ಲೇ ಪದಗ್ರಹಣದ ದಿನಾಂಕ ನಿಗದಿ ಮಾಡ್ತೀವಿ. ಇಂದು ಸಿದ್ದರಾಮಯ್ಯರನ್ನ ಭೇಟಿಯಾಗಿ‌ ಚರ್ಚೆ ಮಾಡಿ, ದಿನಾಂಕ ನಿಗದಿ ಮಾಡ್ತೀವಿ ಎಂದು ಹೇಳಿದರು.

ಲಾಕ್ ಡೌನ್‌ ಮುಂದುವರಿಕೆ ವಿಚಾರ:  

ಇದರ ಬಗ್ಗೆ ನಾನೇನು ನಿರ್ಧಾರ ಮಾಡೋಕ್ ಆಗಲ್ಲ. ಸರ್ಕಾರ ಏನ್ ತಿರ್ಮಾನ ಮಾಡುತ್ತೋ ಅದನ್ನ ಫಾಲೋ ಮಾಡ್ತೀವಿ. ಮಂತ್ರಿಗಳಲ್ಲಿ ಹಲವರು ವೈದ್ಯರಿದ್ದಾರೆ, ಎಲ್ಲಾ ಅವರು ತೀರ್ಮಾನ ಮಾಡ್ತಾರೆ. ನಾವು ಕೇವಲ ಪ್ರಸಾದ ಸ್ವೀಕರಿಸ್ತೀವಿ ಎಂದು ಹೇಳಿದರು.


Spread the love

Leave a Reply

Your email address will not be published. Required fields are marked *