Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಭಾರೀ ಕಳ್ಳತನ: ನಿವೃತ್ತ EE ಮನೆಯಲ್ಲಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಲೂಟಿ

ಹುಬ್ಬಳ್ಳಿ: ನೀರಾವರಿ ಇಲಾಖೆಯ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಆದರ್ಶನಗರದಲ್ಲಿ ನಡೆದಿದೆ.


ನಿವೃತ್ತ ಇಂಜಿನಿಯರ್ ಮಹಾದೇವಪ್ಪ ಭೀಮಕ್ಕನವರ ಎಂಬುವವರ ಮನೆಯಲ್ಲೇ ಕಳ್ಳತನ ನಡೆದಿದ್ದು, 380 ಗ್ರಾಂ ಚಿನ್ನ, 15 ಕೆಜಿ ಬೆಳ್ಳಿ, 10ಬೆಲೆಬಾಳುವ ರೇಷ್ಮೆ ಸೀರೆ, ಸಾವಿರಾರೂ ರೂಪಾಯಿ ನಗದನ್ನ ದೋಚಿಕೊಂಡು ಪರಾರಿಯಾಗಲಾಗಿದೆ.


ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಘಟನೆ ನಡೆದಿದ್ದು, ಪರವೂರಿಂದ ಮರಳಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಸ್ವತಃ ಪೊಲೀಸ್ ಕಮೀಷನರ ಲಾಬುರಾಮ್ ಅವರೇ ಮನೆಗೆ ಆಗಮಿಸಿದ್ದರು. ಘಟನೆಯ ಬಗ್ಗೆ ತಪಾಸಣೆ ನಡೆಸಿದ ನಂತರ ಮಾತನಾಡಿದ ಕಮೀಷನರ್ ಲಾಬುರಾಮ್, ತಕ್ಷಣವೇ ಸಾಕ್ಷಿಗಳಿಗಾಗಿ ಹುಡುಕಾಟ ನಡೆಸಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದರು.
ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳು ಕಳ್ಳತನ ನಡೆದ ಮನೆಯಲ್ಲಿ ತೀವ್ರ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *