ಹುಬ್ಬಳ್ಳಿ ಬಳಿ ಭೀಕರ ಅಪಘಾತ- ಮೂವರ ದುರ್ಮರಣ, ಓರ್ವನ ಸ್ಥಿತಿ ಗಂಭೀರ…

ಹುಬ್ಬಳ್ಳಿ: ಕಾರೊಂದು ಗಣೇಶ ಟ್ರಾವೆಲರ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ.
ಆಂದ್ರದ ಕರ್ನೂಲು ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು. ಅವರ ಕಾರಿನಲ್ಲಿ ಮದ್ಯದ ಬಾಟಲ್ಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳು ಹಾಗೂ ಗಂಭೀರವಾಗಿ ಗಾಯಗೊಂಡವನನ್ನ ಕಿಮ್ಸಗೆ ರವಾನೆ ಮಾಡಿದ್ದು, ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ.