Posts Slider

Karnataka Voice

Latest Kannada News

ಹುಬ್ಬಳ್ಳಿ ಬಳಿ ಭೀಕರ ರಸ್ತೆ ಅಪಘಾತ….

1 min read
Spread the love

ಹುಬ್ಬಳ್ಳಿ: ಹು-ಧಾ ಬೈಪಾಸ್ ನ ಧಾರಾವತಿ ಹನುಮಂತ ದೇವಸ್ಥಾನದ ಬಳಿ ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿ ಲಾರಿಯಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿ ಇನ್ನೊಂದು ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ ಎದುರುಗಡೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು,ಪಕ್ಕದಲ್ಲೇ ಇದ್ದ ಇನ್ನೊಂದು ಲಾರಿ ಹಾಗೂ ಸ್ಕೂಟಿ ವಾಹನಕ್ಕೆ ಕೂಡಾ ಡಿಕ್ಕಿ ಹೊಡೆದಿದೆ.

ಒಟ್ಟು ಅಪಘಾತದಲ್ಲಿ ಮೂರು ಲಾರಿ ಸೇರಿದಂತೆ ಒಂದು ಸ್ಕೂಟಿ ಅಪಘಾತದಲ್ಲಿ ನುಜ್ಜು ಗುಜ್ಜಾಗಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.ಸದ್ಯ ಘಟನೆಯಲ್ಲಿ ಗಾಯಗೊಂಡವರು ಯಾರು ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

Leave a Reply

Your email address will not be published. Required fields are marked *