ಹುಬ್ಬಳ್ಳಿ ಪಾಲಿಕೆ ಕಚೇರಿಯಲ್ಲಿ ‘ದಾಂಧಲೆ’- ‘ಗಾಡಿ ಗಾಜು ಪುಡಿ ಪುಡಿ’…

ಹುಬ್ಬಳ್ಳಿ…Exclusive
ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಕಚೇರಿ ಕಿಡಕಿಯ ಗಾಜು ಹಾಗೂ ವಾಹನಗಳು ಜಖಂಗೊಂಡ ಘಟನೆ ನಡೆದಿದೆ.
ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹ್ಮದ್ ಎಂಬಾತ ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ,ಕಲ್ಲುಗಳಿಂದ ಕಚೇರಿ ಕಿಡಕಿ ಹಾಗೂ ಎರಡು ಕಾರುಗಳು ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ.
ಕೂಡಲೇ ಅಲ್ಲೇ ಇದ್ದ ಸೆಕ್ಯೂರಿಟಿ ಸಿಬ್ಬಂದಿ ಉಪನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದು ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆಯ ಪೊಲೀಸರು ಆರೋಪಿ ಮೊಹ್ಮದ್ ನನ್ನು ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ ಮಹಾನಗರ ಪಾಲಿಕೆಯಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲಿನಿಂದ ದಾಳಿ.
ಇಂದು ಮುಂಜಾನೆ 8.30ಕ್ಕೇ ಪಾಲಿಕೆ ಕಚೇರಿಗೆ ಬೈಕ್ ನಲ್ಲಿ ಬಂದಿದ್ದ ಆರೋಪಿ ಮೊಹ್ಮದ್.
ಗಣೇಶ ಪೇಟ್ ನಲ್ಲಿನ ಮೊಹ್ಮದ್ ಆಸೀಫ್ ಎಂಬಾತನಿಂದ ವಾಹನಗಳ ಮೇಲೆ ಏಕಾಏಕಿ ಕಲ್ಲಿನಿಂದ ದಾಳಿ.
ಪಾಲಿಕೆ ಆಯುಕ್ತರಿಗೆ ಅವಾಚ್ಯವಾಗಿ ನಿಂದನೆ ಮಾಡುತ್ತಾ ಕಲ್ಲು ತೂರಾಟ.
ಎರಡು ಕಾರು ಹಾಗೂ ಕಸ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಕಲ್ಲು ತೂರಾಟ.
ಮೂರು ವಾಹನದ ಗ್ಲಾಸ್ ಸಂಪೂರ್ಣ ಜಖಂ.
ಸೆಕ್ಯೂರಿಟಿ ಸಿಬ್ಬಂದಿಗಳಿಂದ ಉಪನಗರ ಠಾಣೆಯ ಪೊಲೀಸರಿಗೆ ಮಾಹಿತಿ.
ಸ್ಥಳಕ್ಕೆ ಬಂದ ಉಪನಗರ ಠಾಣೆಯ ಪೋಲಿಸರಿಂದ ಆರೋಪಿ ಬಂಧನ.
ಆರೋಪಿಯನ್ನು ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ.