Karnataka Voice

Latest Kannada News

ಹುಬ್ಬಳ್ಳಿಯಲ್ಲಿ “ರವಿವಾರ” ಕೇದಾರ ಜಗದ್ಗುರುಗಳ ಸನಾತನ ಧರ್ಮ ಸಭೆ…

ಹುಬ್ಬಳ್ಳಿ: ರಜತ್ ಉಳ್ಳಾಗಡ್ಡಿಮಠ ಫೌಂಡೇಶನ್ ವತಿಯಿಂದ ಶ್ರೀ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ರಾವಲ್ ಪದವಿ ವಿಭೂಷಿತ ಭೀಮಾಶಂಕರ ಲಿಂಗ ಭಗವತ್ಪಾದ ಗಳವರ ದಿವ್ಯ ಸಾನ್ನಿಧ್ಯದಲ್ಲಿ  ಸನಾತನ ಧರ್ಮ ಜಾಗೃತಿ ಅಭಿಯಾನವನ್ನ ಹಮ್ಮಿಕೊಳ್ಳಲಾಗಿದೆ.

ರವಿವಾರ ದಂದು ಮಾರ್ಚ್ 20 ರಂದು ಸಂಜೆ 4.00 ಗಂಟೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿ ಇರುವ ವಿಶ್ವನಾಥ್ ಕಲ್ಯಾಣ ಮಂಟಪದಲ್ಲಿ ಸನಾತನ ಧರ್ಮ ಜಾಗೃತಿ ಅಭಿಯಾನದ ಸಭೆಯನ್ನು ಆಯೋಜಿಸಲಾಗಿದೆ.

ನಾಡಿನ  ಹರಗುರು ಚರಮೂರ್ತಿಗಳು ಸಮಾಜದ ಗಣ್ಯರು ರಾಜಕೀಯ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರಣ ಭಕ್ತಾದಿಗಳು ಕುಟುಂಬ ಸಮೇತ  ಸನಾತನ ಧರ್ಮ ಸಭೆಯಲ್ಲಿ ಭಾಗವಹಿಸಿ ಕೇದಾರ ಜಗದ್ಗುರುಗಳ  ಆಶೀರ್ವಾದ ಪಡೆಯಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

ರಜತ್ ಸಂಭ್ರಮ : ಇದೇ ಕಾರ್ಯಕ್ರಮದಲ್ಲಿ ಕಿಮ್ಸ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದಂತಹ ನರ್ಸ್ ಗಳಿಗೆ ಆಂಬ್ಯುಲೆನ್ಸ್ ಡ್ರೈವರ್ ಗಳಿಗೆ RTPCR ಟೆಸ್ಟ್ ಮಾಡಿದಂಥ ಲ್ಯಾಬ್ ಟೆಕ್ನಿಷಿಯನ್ ಗಳಿಗೆ ಕರೋನಾ ವಾರಿಯರ್ಸ್ ಎಂದು ಸನ್ಮಾನಿಸಲಾಗುವುದುದೆಂದು ಸಂಘಟಕ ರಜತ್ ಉಳ್ಳಾಗಡ್ಡಿಮಠ ಹೇಳಿದ್ದಾರೆ.

Leave a Reply

Your email address will not be published. Required fields are marked *