ಹುಬ್ಬಳ್ಳಿಯಲ್ಲಿ “ಇಬ್ಬರಿಗೆ” ಚಾಕು ಇರಿತ…

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಜಗಳ ಪ್ರಾರಂಭವಾಗಿ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಈಗಷ್ಟೇ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.

ಹುಬ್ಬಳ್ಳಿಯ ದೇವಾಂಗಪೇಟೆಯ ಸ್ಮಶಾನದ ಬಳಿ ಇಂದು ಸಾಯಂಕಾಲ ಕೆಲವು ಯುವಕರ ನಡುವೆ ಜಗಳ ಪ್ರಾರಂಭವಾಗಿ ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ಯುವಕರ ಗುಂಪೊಂದು ಕಾರ್ತಿಕ ಹಾಗೂ ನಾಗರಾಜ ಕುತ್ತಿಗೆ ಮತ್ತು ಎದೆಗೆ ಚಾಕು ಇರಿದಿದ್ದಾರೆ.
ಕೂಡಲೇ ಸ್ಥಳೀಯರು ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.